ಮಡಿಕೇರಿ, ಮೇ ೧೮ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ ೨೦೨೪-೨೫ನೇ ಸಾಲಿನ ೬ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರವಾಗಿ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ಅದರಂತೆ ಸಪಾಯಿ ಕರ್ಮಚಾರಿ, ಗುರುತಿಸಿರುವ ಮ್ಯಾನ್ಯುಯಲ್ ಸ್ಕಾö್ಯವೆಂಜರ್, ಚಿಂದಿ ಆಯುವವರು, ಸ್ಮಶಾನ ಕಾರ್ಮಿಕರ ಮಕ್ಕಳು ಶೇ.೧೦, ಬಾಲಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು ಶೇ.೧೦, ಶೇ.೨೫ ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್‌ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು ಶೇ.೧೦, ಗುರುತಿಸಿರುವ ಅಲೆಮಾರಿ, ಅರೆಅಲೆಮಾರಿ, ಸೂಕ್ಷö್ಮ, ಅತೀ ಸೂಕ್ಷö್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊAಡ ಪೋಷಕರ ಮಕ್ಕಳು ಶೇ.೧೦ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ ೫ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಶೇ.೧೦ ರಂದು ಹಂಚಿಕೆ ಮಾಡಲಾಗಿದೆ.

ವಿಶೇಷ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ತಾ. ೨೮ ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಮೀಪದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.