ವೀರಾಜಪೇಟೆ, ಮೇ ೧೯: ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ ‘ಬಂಟರ ಸಂಗಮ-೨೦೨೪’ ಕ್ಕೆ ಶನಿವಾರ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಬಂಟರ ಸಂಘದ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಉದ್ಯಮಿ ಸುಧಾಕರ್ ರೈ ಚಾಲನೆ ನೀಡಿದರು.

ಬಂಟರ ಸಂಘದ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್. ಲೀಲಾಧರ್ ರೈ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ್ ರೈ, ಕಾರ್ಯದರ್ಶಿ ಸಂಪತ್ ಶೆಟ್ಟಿ, ಖಜಾಂಚಿ ಮದನ್ ಶೆಟ್ಟಿ, ನಿರ್ದೇಶಕರಾದ ಡಾ.ಹೇಮಂತ್ ಶೆಟ್ಟಿ, ಸುರೇಶ್ ರೈ, ಸುದೇಶ್ ರೈ, ಪ್ರದೀಪ್ ರೈ, ಮಹಿಳಾ ಘಟಕದ ಅಧ್ಯಕ್ಷೆ ನೀತು ರೈ, ಗೌರವಾಧ್ಯಕ್ಷೆ ಕುಸುಮ ಎನ್.ಶೆಟ್ಟಿ, ಕಾರ್ಯದರ್ಶಿ ಶಶಿಕಲಾ ಶೆಟ್ಟಿ ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

ಕ್ರಿಕೆಟ್ ಪಂದ್ಯಾಟದಲ್ಲಿ ಜಿಲ್ಲೆಯ ವಿವಿಧ ಭಾಗದ ಸುಮಾರು ೨೦ ತಂಡಗಳು ಭಾಗವಹಿಸಿದ್ದವು.