ಕುಶಾಲನಗರ, ಮೇ ೧೮: ವಾಸವಿ ಜಯಂತಿ ಅಂಗವಾಗಿ ಕುಶಾಲನಗರ ಆರ್ಯವೈಶ್ಯ ಮಂಡಳಿ ಮತ್ತು ವಾಸವಿ ಯುವಜನ ಸಂಘ ಆಶ್ರಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಕುಶಾಲನಗರ ರಥಭೀದಿಯ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಚೆಂಡೆ ವಾದ್ಯ ಮೇಳ ವಿಶಿಷ್ಟವಾಗಿತ್ತು.

ವಾಸವಿ ಜಯಂತಿ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗಿನಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು. ಅರ್ಚಕ ರಾದ ಗಿರೀಶ್ ಭಟ್, ಯೋಗೇಶ್ ಭಟ್, ದೇವರಾಜ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ಜರುಗಿದವು.

ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊAದಿಗೆ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪೂಜೆ ಸಲ್ಲಿಸಿದರು. ವಾಸವಿ ಜಯಂತಿ ಅಂಗವಾಗಿ ಸಮುದಾಯದ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಉಪಾಧ್ಯಕ್ಷ ಎಸ್.ಎಂ. ಸತೀಶ್, ಖಜಾಂಚಿ ನಟರಾಜ್ ಅಶೋಕ್ ಕುಮಾರ್, ಆರ್ಯವೈಶ್ಯ ಮಂಡಳಿಯ ರಾಜ್ಯ ಕಾರ್ಯದರ್ಶಿ ಬಿ.ಆರ್. ನಾಗೇಂದ್ರ ಪ್ರಸಾದ್, ಜಿಲ್ಲಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಮಹಿಳಾ ಘಟಕದ ಲಕ್ಷಿö್ಮ ಶ್ರೀನಿವಾಸ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್, ವಾಸವಿ ಯುವಜನ ಸಂಘದ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷರಾದ ಬಾಲಾಜಿ, ವೈಶಾಕ್, ರಾಕೇಶ್, ನಿಖಿಲ್, ರವಿಪ್ರಕಾಶ್, ಕಾರ್ಯದರ್ಶಿ ಅಂಜನ್ ಮತ್ತಿತರರು ಇದ್ದರು.