ಸುಂಟಿಕೊಪ್ಪ, ಮೇ ೨೦: ಸೋಮವಾರಪೇಟೆ ತಾಲೂಕಿನ ಮಾದಾಪುರ ವ್ಯಾಪ್ತಿಯಲ್ಲಿನ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯ ತಾ.೨೧ರಂದು (ಇಂದು) ಲೋಕಾರ್ಪಣೆಗೊಳ್ಳಲಿದೆ.

ನೂತನ ದೇವಾಲಯದ ಉದ್ಘಾಟನೆ ಮತ್ತು ಆರ್ಶೀವಚನವನ್ನು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಡಾ. ಬರ್ನಾಡ್ ಮೊರಾಸ್ ನೆರವೇರಿಸಲಿದ್ದು, ಮೈಸೂರು ಧರ್ಮ ಕ್ಷೇತ್ರದ ಜಾನ್ ಅಲ್ಬರ್ಡ್ ಮೆಂಡೋನ್ಸಾ, ಮಡಿಕೇರಿ ವಲಯದ ಜಾರ್ಜ್ ದೀಪಕ್ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾಧಿಕಾರಿ ದಿವಾಕರ್ ಎಂ. ಲಕ್ಷಿö್ಮÃಜಾಲ ಎಸ್ಟೇಟ್ ಬೆಳೆಗಾರ ಕೋಗಂಡ ವಿನಯ್ ಸೋಮಯ್ಯ, ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಪ್ಪ, ಉಪಾಧ್ಯಕ್ಷ ಸುರೇಶ್, ಸದಸ್ಯರುಗಳಾದ ಅಂತೋಣಿ, ಪಿ.ಡಿ. ಜೆರ್ಮಿ, ದಮಯಂತಿ ಪಾಲ್ಗೊಳ್ಳಲಿದ್ದಾರೆ.

ಮಡಿಕೇರಿ ವಲಯದ ಶ್ರದ್ಧಾ ಕೇಂದ್ರಗಳಲ್ಲಿ ಒಂದಾಗಿರುವ ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದೆ.