ಕುಶಾಲನಗರ, ಮೇ ೨೦: ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಆರ್ಯವೈಶ್ಯ ಮಂಡಳಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ಆರ್. ನಾಗೇಂದ್ರ ಪ್ರಸಾದ್ ಅವರಿಗೆ ವಾಸವಿ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕುಶಾಲನಗರ ವಾಸವಿ ಯುವಜನ ಸಂಘ ಆಶ್ರಯದಲ್ಲಿ ಕುಶಾಲನಗರ ರಥಬೀದಿಯ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಜಿಲ್ಲಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ವಾಸವಿ ಯುವಜನ ಸಂಘದ ಅಧ್ಯಕ್ಷ ಪ್ರವೀಣ್, ಪುರಸಭೆ ಸದಸ್ಯ ಅಮೃತ್ ರಾಜ್, ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷಿö್ಮ ಶ್ರೀನಿವಾಸ್ ಮತ್ತಿತರರು ಇದ್ದರು.