ಸೋಮವಾರಪೇಟೆ, ಮೇ ೨೦: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆ್ಯಂಬ್ಯುಲೆನ್ಸ್ಗೆ ಸಂಬAಧಿಸಿದ ವಿಮೆ ಪಾವತಿಯಾಗದೇ ಇರುವುದರಿಂದ ಸಂಚಾರ ಸ್ಥಗಿತಗೊಳಿಸಿದ್ದು, ರೋಗಿಗಳಿಗೆ ಅನಾನುಕೂಲ ಆಗುತ್ತಿರುವುದನ್ನು ಮನಗಂಡ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಆಸ್ಪತ್ರೆ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ಒಂದು ತಿಂಗಳಿನಿAದ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ಆಡಳಿತ ಅಧಿಕಾರಿ ಮೀನಾಕ್ಷಿ ಅವರು, ತಾನು ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದು ಸಹೋದ್ಯೋಗಿಗಳ ಕೊರತೆಯಿಂದ ಈ ಬಗ್ಗೆ ಗಮನ ಹರಿಸಲು ಸಾಧ್ಯವಾಗಲಿಲ್ಲ. ಮುಂದಿನ ಎರಡು ದಿನಗಳಲ್ಲಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದರು.

ಆಸ್ಪತ್ರೆಯ ವೈದ್ಯ ಡಾ. ಕಿರಣ್ ಮಾತನಾಡಿ, ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಸೇರಿದಂತೆ ಅನೇಕ ಅಗತ್ಯಗಳ ಬಗ್ಗೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ತಿಳಿಸಿದರು. ಕೊಡಗಿನಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಆಸ್ಪತ್ರೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವಂತೆ ಕರವೇ ನಗರಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದರು.

ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ನಗರ ಕಾರ್ಯದರ್ಶಿ ರವೀಶ್, ತಾಲ್ಲೂಕು ಉಪಾಧ್ಯಕ್ಷ ಶಿವು, ಜಿಲ್ಲಾ ಕಾರ್ಮಿಕ ಘಟಕದ ಸಂಚಾಲಕ ಮಂಜುನಾಥ, ಯುವ ಘಟಕದ ಸಂಚಾಲಕ ನಿತನ್ ಮಿಟ್ಟು, ರವಿ ಬಿ.ವಿ., ಪುರುಷೋತ್ತಮ, ಇಬ್ರಾಹಿಂ ಮತ್ತಿತರರು ಭಾಗವಹಿಸಿದ್ದರು.