ಮಡಿಕೇರಿ, ಮೇ ೨೧: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯತೆಯನ್ನು ಉತ್ತೇಜಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಾಗೂ ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ತಮ್ಮ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ.

ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್‌ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿAತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬAದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ.

ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ. ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿವರಗಳನ್ನು ಒದಗಿಸಬೇಕು. ಪ್ರಬಂಧವನ್ನು ಸಲ್ಲಿಸಲು ತಾ. ೨೭ ಕೊನೆಯ ದಿನವಾಗಿದೆ. ಮೂಲ ಪ್ರಬಂಧ ಮಾತ್ರ ಅರ್ಹ ಮತ್ತು ಬೇರೆ ಯಾವುದೇ ಸ್ಪರ್ಧೆಗಳಿಗೆ ಸಲ್ಲಿಸಿರಬಾರದು ಅಥವಾ ಬೇರೆ ರೀತಿಯಲ್ಲಿ ಪ್ರಕಟಿಸಿರಬಾರದು. ಕೃತಿಚೌರ್ಯಕ್ಕಾಗಿ ಎಲ್ಲಾ ಪ್ರಬಂಧಗಳನ್ನು ಪರಿಶೀಲಿಸಲಾಗುತ್ತದೆ. ಪ್ರಬಂಧವನ್ನು ಒಮ್ಮೆ ಸಲ್ಲಿಸಿದ ನಂತರ, ಸ್ಪರ್ಧಿಗಳಿಗೆ ಯಾವುದೇ ಪರಿಷ್ಕರಣೆಗಳನ್ನು ಮಾಡಲು ಅನುಮತಿಸಲಾಗುವುದಿಲ್ಲ.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ರಚಿಸಿದ ತಜ್ಞರ ಸಮಿತಿಯು ಪ್ರಬಂಧಗಳನ್ನು ಮೌಲ್ಯಮಾಪನ ಮಾಡುತ್ತದೆ. ಸಮಿತಿಯ ನಿರ್ಧಾರವು ಅಂತಿಮವಾಗಿರುತ್ತದೆ ಮತ್ತು ಎಲ್ಲರೂ ಇದಕ್ಕೆ ಬದ್ಧರಾಗಿರಬೇಕು.

ಮೊದಲ ಮೂರು ಸ್ಥಾನ ಪಡೆದ ಪ್ರಬಂಧಗಳು ನಗದು ಬಹುಮಾನಗಳನ್ನು ನೀಡಲಾಗುವುದು: ೧ನೇ ಬಹುಮಾನ ರೂ. ೫ ಸಾವಿರ, ೨ನೇ ಬಹುಮಾನ ರೂ. ೩ ಸಾವಿರ ಮತ್ತು ೩ನೇ ಬಹುಮಾನ ರೂ. ೨ ಸಾವಿರ.

ಇಂಗ್ಲಿಷ್ ಮತ್ತು ಕನ್ನಡ ಪ್ರಬಂಧಗಳಿಗೆ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯ ವಿಜೇತರನ್ನು ಇಮೇಲ್ ಮೂಲಕ ಸಂಪರ್ಕಿಸಲಾಗುತ್ತದೆ. ಬಹುಮಾನ ವಿಜೇತರು ಗುರುತಿನ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ. ಎಲ್ಲಾ ಪ್ರಬಂಧಗಳು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿ ಒಡೆತನಕ್ಕೆ ಒಳಗೊಂಡಿರುತ್ತವೆ ಹಾಗೂ ಪ್ರಬಂಧಗಳನ್ನು ಯಾವುದೇ ಉದ್ದೇಶಕ್ಕಾಗಿ ಯಾವುದೇ ಮಾಧ್ಯಮದಲ್ಲಿ ಬಳಸುವ, ಪುನರುತ್ಪಾದಿಸುವ, ಪ್ರಕಟಿಸುವ, ಪ್ರಸಾರ ಮಾಡುವ ಅಥವಾ ಇತರ ರೀತಿಯಲ್ಲಿ ಸಂವಹನ ನಡೆಸುವ ಹಕ್ಕನ್ನು ಹೊಂದಿರುತ್ತದೆ.

ಮೌಲ್ಯಮಾಪನ ಮಾನದಂಡಗಳಿಗೆ ಸಂಬAಧಿಸಿದAತೆ ಯಾವುದೇ ವಿಚಾರಣೆಯನ್ನು ಪುರಸ್ಕರಿಸಲಾಗುವುದಿಲ್ಲ. ಅಗತ್ಯವಿದ್ದರೆ ಮೇಲಿನ ನಿಯಮಗಳಿಗೆ ತಿದ್ದುಪಡಿಗಳನ್ನು ತರಲು ಮತ್ತು ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡುವ ಅಂತಿಮ ಹಕ್ಕನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಹೊಂದಿರುತ್ತದೆ.

ಪ್ರಬಂಧವು ೧೦೦೦ ಪದಗಳನ್ನು ಮೀರಬಾರದು ಮತ್ತು ಇಂಗ್ಲಿಷ್‌ನಲ್ಲಿ ಏರಿಯಾಲ್ ಫಾಂಟ್ ಗಾತ್ರ ೧೪ ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ ೧೨ ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು.

ಪ್ರಬಂಧ ರಚನೆ: ಪ್ರಬಂಧವನ್ನು ಪೀಠಿಕೆ, ಮುಖ್ಯ ಪ್ಯಾರಗಳು ಮತ್ತು ತೀರ್ಮಾನ ಎಂಬ ವಿಭಾಗಗಳಿರುವಂತೆ ರಚಿಸಬಹುದು. ಇದು ಕೇವಲ ಸೂಚಿಸಿದ ಮತ್ತು ನಿರೀಕ್ಷಿತ ಮೂಲ ರಚನೆಯಾಗಿದ್ದು, ಅಗತ್ಯ ಅಥವಾ ಪ್ರಸ್ತುತವೆನಿಸಿದರೆ ಇತರ ವಿಭಾಗಗಳನ್ನು ಒಳಗೊಂಡAತೆ ರಚಿಸಬಹುದು.

ಮೌಲ್ಯಮಾಪನ ಮಾನದಂಡ: ಪ್ರಬಂಧಗಳನ್ನು ವಿಷಯ ಪ್ರಸ್ತುತತೆ ಮತ್ತು ಸ್ವಂತಿಕೆ (ಶೇ. ೩೦), ಪ್ಯಾರಾಗಳ ನಡುವೆ ಸಂಪರ್ಕ, ಸುಸಂಬದ್ಧತೆ, ರಚನೆ ಮತ್ತು ಪದ ಮಿತಿ (ಶೇ. ೨೦), ಸೃಜನಶೀಲತೆ ಮತ್ತು ಪ್ರಸ್ತುತಿ (ಶೇ. ೩೦), ಭಾಷೆ, ನ್ಯಾಯಸಮ್ಮತತೆ, ನಿರರ್ಗಳತೆ, ಸಾಮರ್ಥ್ಯ (ಶೇ. ೨೦) ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ.

ಪ್ರಬಂಧದ ಹಾರ್ಡ್ ಕಾಫಿಯನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನ ಕಾಲೇಜು ಪ್ರವೇಶ ದ್ವಾರದ ಬಳಿ, ವಿದ್ಯಾರಣ್ಯಪುರ ಪೋಸ್ಟ್, ಯಲಹಂಕ, ಬೆಂಗಳೂರು- ೫೬೦೦೯೭, ವಿಳಾಸಕ್ಕೆ ಅಂಚೆ ಮೂಲಕ ಮತ್ತು ಪಿಡಿಎಫ್ ಪ್ರತಿಯನ್ನು ಇ-ಮೇಲ್ essಚಿಥಿ.ಞsಣಚಿ@gmಚಿiಟ.ಛಿom ಗೆ ಕಳುಹಿಸುವುದು. ಪ್ರಬಂಧದ ಜೊತೆಗೆ ವಿದ್ಯಾರ್ಥಿಯ ಗುರುತಿನ (ಆಧಾರ್-ವಿದ್ಯಾರ್ಥಿ ಐಡಿ ಕಾರ್ಡ್) ಪುರಾವೆಯನ್ನು ಸಲ್ಲಿಸಿ (ಪೋಸ್ಟ್ ಮೂಲಕ ಹಾರ್ಡ್ ಕಾಪಿ ಮತ್ತು ಮೇಲೆ ನೀಡಲಾದ ಇ-ಮೇಲ್‌ಗೆ ಸಾಫ್ಟ್ ಕಾಪಿ) ಕಳುಹಿಸುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ತಿತಿತಿ.ಞsಣಚಿಛಿಚಿಜemಥಿ.iಟಿ ನಲ್ಲಿ ಹಾಗೂ ಮೊ. ೯೦೦೮೬೭೫೧೨೩ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ತಿಳಿಸಿದ್ದಾರೆ.