ಶನಿವಾರಸಂತೆ, ಮೇ ೨೧: ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಸ್ಥಾನದ ೯ನೇ ವರ್ಷದ ವಾರ್ಷಿಕೋತ್ಸವ ತಾ. ೨೬ ರಂದು ನಡೆಯಲಿದೆ.

ಅಂದು ಬೆಳಿಗ್ಗೆ ೬ ಗಂಟೆಯಿAದ ಅರ್ಚಕ ಮಂಜುನಾಥ ಶರ್ಮ ಅವರ ನೇತೃತ್ವದಲ್ಲಿ ಗಂಗಾಪೂಜೆ, ಪ್ರಾರ್ಥನೆ, ಕಲಶಪೂಜೆ, ಪಂಚಾಮೃತ ಅಭಿಷೇಕ, ೧೦ ಗಂಟೆಗೆ ಮಹಾಗಣಪತಿ ಹೋಮ, ನಂತರ ವಿಜಯ ವಿನಾಯಕ ಸ್ವಾಮಿಗೆ ೧೦೮ ಸಿಯಾಳಾಭಿಷೇಕ ನೆರವೇರಲಿದೆ. ಮಧ್ಯಾಹ್ನ ೧೨ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಲಿದೆ. ಸಂಜೆ ೫ ಗಂಟೆಯಿAದ ವಿಜಯ ವಿನಾಯಕ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ, ದೇವಸ್ಥಾನದಿಂದ ಮೆರವಣಿಗೆಯಲ್ಲಿ ಮುಖ್ಯರಸ್ತೆಯ ಮಾರ್ಗವಾಗಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ತಲುಪಿ, ಮತ್ತೆ ಅದೇ ಮಾರ್ಗವಾಗಿ ದೇವಸ್ಥಾನಕ್ಕೆ ತಲುಪಲಿದೆ. ರಾತ್ರಿ ೭ ಗಂಟೆಗೆ ಅಷ್ಟವಧಾನ ಸೇವೆ, ರಂಗಪೂಜೆ, ಪ್ರಸಾದ ವಿತರಣೆಯಾಗಲಿದೆ. ೮ ಗಂಟೆಯಿAದ ಅನ್ನಸಂತರ್ಪಣೆ ನಡೆಯಲಿದೆ ಎಂದು ಆದರ್ಶ ವಿಜಯ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಎಸ್.ಆರ್. ಮಧು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.