ಕೂಡಿಗೆ, ಮೇ ೨೨: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಅಳುವಾರ ಗ್ರಾಮದ ಟಿ.ವೈ. ವಿಜಯ ಕುಮಾರ್ ಎಂಬವರ ಮನೆಯ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ.

ಕಳೆದ ಒಂದು ವಾರದಿಂದ ಈ ವ್ಯಾಪ್ತಿಯ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕುಶಾಲನಗರ ಕಂದಾಯ ಪರಿವೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಫೀರ್ ಮಹಮ್ಮದ್ ಸ್ಥಳ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮತ್ತು ಕಂದಾಯ ಇಲಾಖೆಯ ವರದಿಯ ಆಧಾರದ ಮೇಲೆ ಪರಿಹಾರವನ್ನು ಒದಗಿಸಲಾಗುವುದು ಎಂದು ಕಂದಾಯ ಇಲಾಖೆ ತಿಳಿಸಿದೆ.