ಕುಶಾಲನಗರ, ಮೇ ೨೨: ಕುಶಾಲನಗರ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಶ್ರೀ ಶತಚಂಡಿಕಾಯಾಗ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬುಧವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಪೂಜೆ, ಗೋ ಪೂಜೆ, ಧ್ವಜ ಪೂಜೆ, ಅಶ್ವಪೂಜೆ, ನಂತರ ಚಂಡಿಕಾ ಪಾರಾಯಣ ಪೂಜಾ ಕಾರ್ಯಕ್ರಮಗಳು ನಡೆದವು.

ಪ್ರಧಾನ ಅರ್ಚಕ ವೇದಬ್ರಹ್ಮ ಗಿರೀಶ್ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ಜರುಗಿದವು. ಸುಮಾರು ೨೫ಕ್ಕೂ ಅಧಿಕ ಮಂದಿ ಋತ್ವಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಸಂಜೆ ವಾಸವಿ ಬಾಲಕಿಯರ ಸಂಘದ ವತಿಯಿಂದ ದೀಪ ಮೆರವಣಿಗೆ ನಂತರ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಿಂದ ಶ್ರೀ ಗಣಪತಿ ದೇವಾಲಯದ ತನಕ ಮೆರವಣಿಗೆ ತೆರಳಿ ಯಾಗ ಶಾಲೆಗೆ ಪ್ರವೇಶ ಮಾಡಲಾಯಿತು.

ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷಿö್ಮÃ ಶ್ರೀನಿವಾಸ್, ವಾಸವಿ ಯುವಜನ ಸಂಘದ ಅಧ್ಯಕ್ಷ ಪ್ರವೀಣ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್ ಮತ್ತಿತರರು ಇದ್ದರು.