ಕುಶಾಲನಗರ, ಮೇ ೨೨: ಕಳೆದ ಎರಡು ದಿನಗಳ ಹಿಂದೆ ಕುಶಾಲನಗರ ಪಟ್ಟಣ ಮತ್ತು ಹೊರವಲಯಗಳಲ್ಲಿ ಭಾರೀ ಪ್ರಮಾಣದ ಮಳೆ ಸುರಿದ ಹಿನ್ನೆಲೆಯಲ್ಲಿ ಉಂಟಾಗಿರುವ ಹಾನಿಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಪರಿಶೀಲನೆ ಮಾಡಿದರು.

ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು; ಆದಷ್ಟು ಬೇಗನೇ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾಯಿ ಬಡಾವಣೆಯಲ್ಲಿ ಶಾಶ್ವತವಾಗಿ ಪ್ರವಾಹ ತಪ್ಪಿಸಲು ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ

(ಮೊದಲ ಪುಟದಿಂದ) ಸಂಬAಧಿಸಿದ ಅಧಿಕಾರಿಗಳಿಗೆ ಹೇಳಿದರು. ರಾಜ ಕಾಲುವೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಕುಶಾಲನಗರ ಪಟ್ಟಣ ಹೊರ ವಲಯದ ಗುಮ್ಮನಕೊಲ್ಲಿ, ಹಾರಂಗಿ ರಸ್ತೆ ವ್ಯಾಪ್ತಿಯ ಬಡಾವಣೆಗಳಿಗೆ ಮತ್ತು ಕೂಡ್ಲೂರು ವ್ಯಾಪ್ತಿಯಲ್ಲಿ ತಡೆಗೋಡೆ ಕುಸಿತದಿಂದ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ಮನೆ ಮಾಲೀಕರಿಗೆ ಸಾಂತ್ವನ ಹೇಳಿದ ಶಾಸಕರು ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬೆನ್ನಲ್ಲೇ ಸಮಸ್ಯೆ ಪರಿಹಾರಕ್ಕೆ ಮತ್ತು ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಹೇಳಿದರು.

ಈ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಪಟ್ಟಣದ ಎರಡು ಬಡಾವಣೆಗಳಿಗೆ ಮಳೆಗಾಲದಲ್ಲಿ ಯಾವುದೇ ರೀತಿ ಹಾನಿ ಉಂಟಾಗ ದಂತೆ ಶಾಶ್ವತ ಪರಿಹಾರಕ್ಕೆ ಈಗಾಗಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರವಾಹ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿ ಗಳಿಗೆ ನಿರ್ದೇಶನ ನೀಡುವುದಾಗಿ ಹೇಳಿದರು.

ಕುಶಾಲನಗರ ಮತ್ತು ಹೊರವಲಯಗಳಲ್ಲಿ ನೂತನ ಬಡಾವಣೆ ನಿರ್ಮಾಣ ಸಂದರ್ಭ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಿಯಮಾನುಸಾರ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಈ ಸಂಬAಧ ಮುಂದಿನ ತಿಂಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಸೂಕ್ತ ಸಲಹೆ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭ ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ. ಶಶಿಧರ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಹರೀಶ್ ಮತ್ತು ಬಡಾವಣೆಗಳ ನಿವಾಸಿಗಳು ಇದ್ದರು.