ಮಡಿಕೇರಿ, ಮೇ ೨೩ : ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಕುಕ್ಲೂರು, ಪುದುಕೋಟೆ, ಐಮಂಗಲ, ಚೆÀಂಬೆಬೆಳ್ಳೂರು, ದೇವಣಗೇರಿ, ಬೆಳ್ಳರಿಮಾಡು, ಕಾವಾಡಿ, ಕೊಮ್ಮೆತೋಡು. ಮಗ್ಗುಲ. ನಲ್ವತೊಕ್ಲು, ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ. ೨೪ ಮತ್ತು ೨೫ರಂದು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿರುವುದರಿAದ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು. ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕು. ಈ ಸಂದರ್ಭ ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ವೀರಾಜಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.