ಕೂಡಿಗೆ, ಮೇ ೨೩: ಕೂಡಿಗೆಯ ಶ್ರೀ ದಂಡಿನಮ್ಮ, ಬಸವೇಶ್ವರ, ಮುತ್ತತ್‌ರಾಯ ದೇವಸ್ಥಾನ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಇದರ ಅಂಗವಾಗಿ ಗ್ರಾಮದ ಮಧ್ಯಭಾಗದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಸವೇಶ್ವರ ವಿಗ್ರಹಕ್ಕೆ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಿ, ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಬಸವನ ವಿಗ್ರಹವನ್ನು ಕುಳ್ಳಿರಿಸಿ, ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಕೆ. ಸೋಮಶೇಖರ್, ಕಾರ್ಯದರ್ಶಿ ಕೆ.ಎಸ್. ಶೇಖರ್, ಉಪಾಧ್ಯಕ್ಷ ಕೆ.ಎನ್. ಮಂಜುನಾಥ, ಮಾಜಿ ಅಧ್ಯಕ್ಷರು, ಸಮಿತಿಯ ನಿರ್ದೇಶಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.