ಅಧಿಕ ಮಳೆ: ಹಂಪಿ ಪಾರಂಪರಿಕ ಕಟ್ಟಡ ಭಾಗಶ ಕುಸಿತ

ಹಂಪಿ, ಮೇ ೨೨: ಕಳೆದ ಕೆಲವು ದಿನಗಳಿಂದ ಬಳ್ಳಾರಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿ ಸ್ಮಾರಕದ ಒಂದು ಭಾಗಕ್ಕೆ ಹಾನಿಯಾಗಿದೆ. ವಿರೂಪಾಕ್ಷ ದೇವಾಲಯದ ಬಳಿ ಇರುವ ೧೬ ಕಂಬಗಳ ಸಾಲು ಮಂಟಪದ ಒಂದು ಭಾಗವು ಮೊನ್ನೆ ಭಾನುವಾರ ಕುಸಿದಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ೧೬ ಕಂಬಗಳ ಪೈಕಿ ಎಂಟು ಕಂಬಗಳು ಬಿದ್ದಿವೆ. ೨-೩ ಗಂಟೆಗಳ ಕಾಲ ನಿರಂತರ ಮಳೆಯಾಯಿತು, ಇದು ರಚನೆಯ ಕೆಳಗಿರುವ ಮಣ್ಣು ಸಡಿಲಗೊಂಡು ಮಳೆಗಾಲಕ್ಕೂ ಮುನ್ನವೇ ಕಂಬಗಳು ಕುಸಿದು ಬಿದ್ದಿವೆ ಎಂದು ಪೊಲೀಸರೊಬ್ಬರು ಹೇಳಿದ್ದಾರೆ. ನಾವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ತಿಳಿಸುತ್ತೇವೆ. ಸದ್ಯಕ್ಕೆ ಯಾವುದೇ ಪುನಶ್ಚೇತನ ಕಾರ್ಯ ಆರಂಭವಾಗಿಲ್ಲ ಎಂದರು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಅಂಕಿಅAಶಗಳ ಪ್ರಕಾರ, ಕಳೆದ ಮೂರು ದಿನಗಳಲ್ಲಿ ಈ ಪ್ರದೇಶದಲ್ಲಿ ಸರಾಸರಿ ೪೭ ಮಿ.ಮೀ. ಮಳೆಯಾಗಿದೆ. ಹವಾಮಾನ ಪರಿಸ್ಥಿತಿಗಳಿಂದಾಗಿ ಈ ರಚನೆಯು ಅಪಾಯಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. ೨೦೧೫ ಮತ್ತು ೨೦೧೩ರಲ್ಲಿ ಸಹ ಮಳೆಯಿಂದಾಗಿ ಹಂಪಿ ಸ್ಮಾರಕದ ಅಡಿಯಲ್ಲಿ ಮಣ್ಣು ಸಡಿಲಗೊಂಡಿದ್ದರಿAದ ಇದೇ ರೀತಿಯ ಹಾನಿ ಸಂಭವಿಸಿದೆ. ಉತ್ತರ ಕರ್ನಾಟಕದಲ್ಲಿ ಮಳೆ ಮತ್ತು ನಂತರದ ಪ್ರವಾಹದಿಂದಾಗಿ ಆಗಸ್ಟ್ನಲ್ಲಿ ಹಲವಾರು ವಿಶ್ವ ಪರಂಪರೆಯ ತಾಣಗಳು ನೀರಿನ ಅಡಿಯಲ್ಲಿದ್ದ ನಂತರ ಈ ಬೆಳವಣಿಗೆಯಾಗಿದೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಅಧಿಕಾರದ ಕೇಂದ್ರವಾದ ಪುರಾತನ ಪಟ್ಟಣವಾದ ಹಂಪಿ ಪ್ರವಾಸಿಗರ ಹಾಟ್‌ಸ್ಪಾಟ್ ಆಗಿದೆ. ೧೪ನೇ ಶತಮಾನದ ಅದ್ಭುತ ಸಾಮ್ರಾಜ್ಯದ ಅವಶೇಷಗಳನ್ನು ೧೯೮೬ ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಗುರುತಿಸಲಾಯಿತು. ಫೆಬ್ರವರಿ ೨೦೧೮ ರಲ್ಲಿ, ಇದನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ೧೦ ಪ್ರವಾಸಿ ತಾಣಗಳಲ್ಲಿ ಒಂದಾಗಿ ಐಕಾನಿಕ್ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿದೆ. ಈ ಸ್ಥಳವು ದ್ರಾವಿಡ ಶೈಲಿಯ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾದ ಹಲವಾರು ಹಿಂದೂ ದೇವಾಲಯಗಳಿಗೆ ಹೆಸರುವಾಸಿಯಾಗಿದೆ.

ಕೊಲ್ಕತ್ತಾದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಹತ್ಯೆ

ಢಾಕಾ, ಮೇ ೨೨: ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಹಿರಿಯ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಕೊಲ್ಕತ್ತಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬAಧ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅಸಾದುಝಮಾನ್ ಖಾನ್ ಅವರು ಪ್ರಕಟಿಸಿದ್ದಾರೆ. ಭಾರತದಲ್ಲಿ ನಾಪತ್ತೆಯಾಗಿದ್ದ ಅವಾಮಿ ಲೀಗ್ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಕೋಲ್ಕತ್ತಾದ ಫ್ಲಾಟ್‌ನಲ್ಲಿ ಕೊಲೆ ಮಾಡಲಾಗಿದೆ ಎಂದು ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದುವರೆಗೆ, ಕೊಲೆಯಲ್ಲಿ ಭಾಗಿಯಾಗಿರುವ ಎಲ್ಲಾ ಹಂತಕರು ಬಾಂಗ್ಲಾದೇಶೀಯರು ಎಂದು ನಮಗೆ ತಿಳಿದು ಬಂದಿದೆ. ಇದು ಯೋಜಿತ ಕೊಲೆ ಎಂದು ಅವರು ಹೇಳಿದ್ದಾರೆ. ೫೬ ವರ್ಷದ ಸಂಸದನ ಹತ್ಯೆಗೆ ಸಂಬAಧಿಸಿದAತೆ ಬಾಂಗ್ಲಾದೇಶ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಮೃತದೇಹ ಎಲ್ಲಿದೆ ಎಂದು ವಿಚಾರಿಸಿದಾಗ ಈ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದರು. ಕೊಲೆ ಹಿಂದಿನ ಉದ್ದೇಶದ ಬಗ್ಗೆ ನಾವು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ. ಭಾರತೀಯ ಪೊಲೀಸರು ಪ್ರಕರಣದ ತನಿಖೆಗೆ ಸಹಕರಿ ಸುತ್ತಿದ್ದಾರೆ ಎಂದು ಎಂದು ಸಚಿವರು ಹೇಳಿದ್ದಾರೆ. ಮೂರು ಬಾರಿ ಸಂಸದ ರಾಗಿದ್ದ ಅನ್ವರುಲ್ ಅಜೀಂ ಅನಾರ್ ಅವರು ಚಿಕಿತ್ಸೆ ಪಡೆಯಲು ಮೇ ೧೨ ರಂದು ಭಾರತಕ್ಕೆ ಬಂದು ನಾಪತ್ತೆಯಾಗಿದ್ದರು. ಮೇ ೧೮ ರಂದು ಉತ್ತರ ಕೊಲ್ಕತ್ತಾದ ಬಾರಾನಗರ ಪೊಲೀಸ್ ಠಾಣೆಯಲ್ಲಿ ಸಂಸದನ ನಾಪತ್ತೆ ಕುರಿತು ಸಾಮಾನ್ಯ ಡೈರಿ ವರದಿಯಲ್ಲಿ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್' ಸೇನಾ ನೇಮಕಾತಿ ರದ್ದು

ಚಂಡೀಗಢ, ಮೇ ೨೨: ಈ ಬಾರಿ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಹರಿಯಾಣದ ಮಹೇಂದ್ರಗಢ-ಭಿವಾನಿ ಲೋಕಸಭಾ ಕ್ಷೇತ್ರದಲ್ಲಿ ನಡೆದ ತಮ್ಮ ಮೊದಲ ಚುನಾವಣಾ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ರೈತರ ಸಮಸ್ಯೆಗೆ ಸಂಬAಧಿಸಿದAತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅಗ್ನಿವೀರ್ ಯೋಜನೆ ಇದು ಮೋದಿಯ ಯೋಜನೆ, ಸೇನೆಯ ಯೋಜನೆ ಅಲ್ಲ. ಸೇನೆಗೆ ಇದು ಬೇಕಾಗಿಲ್ಲ. ಈ ಯೋಜನೆಯನ್ನು ಪಿಎಂಒ (ಪ್ರಧಾನಿ ಕಚೇರಿ) ರೂಪಿಸಿದೆ. ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ಕಸದ ಬುಟ್ಟಿಯಲ್ಲಿ ಹಾಕುತ್ತೇವೆ. ಭಾರತದ ಗಡಿಗಳು ಹರಿಯಾಣ ಮತ್ತು ದೇಶದ ಯುವಕರಿಂದ ಸುರಕ್ಷಿತವಾಗಿದೆ. ನಮ್ಮ ಯುವಕರ ಡಿಎನ್‌ಎಯಲ್ಲಿ ದೇಶಪ್ರೇಮವಿದೆ ಎಂದ ಅವರು, ಮೋದಿ ಹಿಂದೂಸ್ತಾನ್ ಕೆ ಜವಾನರನ್ನು ಕಾರ್ಮಿಕರನ್ನಾಗಿ ಪರಿವರ್ತಿಸಿದ್ದಾರೆ ಎಂದರು. ಮೋದಿ ಸರ್ಕಾರ ೨೨ ಉನ್ನತ ಕೈಗಾರಿಕೋದ್ಯಮಿಗಳ ರೂ. ೧೬ ಲಕ್ಷ ಕೋಟಿ ಸಾಲ ಮನ್ನಾ ಮಾಡುತ್ತದೆ. ಆದರೆ ರೈತರ ಸಾಲವನ್ನು ಮನ್ನಾ ಮಾಡುವುದಿಲ್ಲ ಏಕೆಂದರೆ ಅದು ಅವರನ್ನು ಹಾಳುಮಾಡುತ್ತದೆ ಎಂದು ಬಹಿರಂಗವಾಗಿ ಹೇಳುತ್ತಾರೆ. ರೈತರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ಪರಿಹಾರವನ್ನು ನೀಡಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಭೂಸ್ವಾಧೀನ ಮಸೂದೆಯನ್ನು ಮೋದಿ ಸರ್ಕಾರ ಅದನ್ನು ರದ್ದುಗೊಳಿಸಿತು. ಅವರು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಬೀದಿಗಿಳಿಯಬೇಕಾಯಿತು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹೇಳಿದರು.