ಸಿದ್ದಾಪುರ, ಮೇ ೨೩: ಗಾಳಿ-ಮಳೆಗೆ ಮರ ಕೊಟ್ಟಿಗೆ ಮೇಲೆ ಬಿದ್ದು ಕೊಟ್ಟಿಗೆಗೆ ಹಾನಿಯಾಗಿರುವ ಘಟನೆ ಅವರೆಗುಂದ ಗ್ರಾಮದಲ್ಲಿ ಸಂಭವಿಸಿದೆ. ಕರಡಿಗೋಡು ಗ್ರಾಮದ ನಿವಾಸಿ ಸರೋಜ ಎಂಬವರಿಗೆ ಸೇರಿದ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಓಮಪ ಬಣಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು