ಶನಿವಾರಸಂತೆ, ಮೇ ೨೩: ಸಮೀಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿ ಇರುವ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀಕಾಳಿಕಾಂಬ ದೇವಿಯ ೯ ನೇ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ, ದೇವಿಗೆ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಚಿಕ್ಕ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು.

ಬೆಳಿಗ್ಗೆ ಬೆಳಗುಲಿಯ ಶ್ರೀ ಕಾಳಿಕಾಂಬ ದೇವಾಲಯದ ಪ್ರಧಾನ ಪುರೋಹಿತ ಶಂಕರಾಚಾರ್ಯರ ನೇತೃತ್ವದಲ್ಲಿ ಗುಡುಗಳಲೆ ಶ್ರೀ ಕಾಳಿಕಾಂಬ ದೇವಸ್ಥಾನದ ಪುರೋಹಿತ ಶರತ್ ಹಾಗೂ ತಂಡದವರಿAದ ಗಣಪತಿ ಪೂಜೆ, ಪುಣ್ಯಾಹ, ದೇವತಾನಾಂದಿ, ಅಂಕುರಾರ್ಪಣಾ ಪೂಜೆ, ದೇವಿಗೆ ಅಭಿಷೇಕ, ನವಗ್ರಹ ಪೂಜೆ, ಗಣಪತಿ ಹೋಮ ಹಾಗೂ ವಿಶ್ವಕರ್ಮ ಹೋಮ ನಡೆಯಿತು.

ವಿವಿಧ ಗ್ರಾಮಗಳಿಂದ ಆಗಮಿಸಿದ ೧೫ ವಟುಗಳಿಗೆ ಸಾಮೂಹಿಕ ಉಪನಯನ ಮಾಡಿ ಬ್ರಹ್ಮೋಪದೇಶ ನೀಡಲಾಯಿತು. ಆನಂತರ ಲೋಕ ಕಲ್ಯಾಣಾರ್ಥವಾಗಿ ಸುಮಂಗಲಿಯರಿAದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ೩-೫ ವರ್ಷದ ಮಕ್ಕಳಿಗೆ ಸಾಮೂಹಿಕ ಅಕ್ಷರಭ್ಯಾಸ ಮಾಡಿಸಲಾಯಿತು.ದೇವಿಗೆ ಮಹಾಮಂಗಳಾರತಿಯಾಗಿ ತೀರ್ಥ ಪ್ರಸಾದ ವಿನಿಯೋಗವಾಯಿತು.

ಸಭಾ ಕಾರ್ಯಕ್ರಮದಲ್ಲಿ ಗುಲ್ಬರ್ಗ ಜಿಲ್ಲೆಯ ತಿಂತಿಣಿ ಮೌನೇಶ್ವರ ಮಠದ ಶ್ರೀಬ್ರಹ್ಮಾನಂದ ಆಶೀರ್ವಚನ ನೀಡಿದರು. ಮೈಸೂರು ಮಂಚಳ್ಳಿ ಗವಿಮಠದ ಪ್ರಧಾನ ಕಾರ್ಯದರ್ಶಿ ನಂಜುAಡಸ್ವಾಮಿ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀಕಾಳಿಕಾಂಬ ದೇವಾಲಯ ಸಮಿತಿ ಅಧ್ಯಕ್ಷ ಬಿ.ಬಿ.ನಾಗರಾಜ್, ಕಾರ್ಯದರ್ಶಿ ಸಿ.ಸಿ. ಚಂದ್ರಶೇಖರ್, ಸಹಕಾರ್ಯದರ್ಶಿ ಎ.ಎನ್. ಮಂಜುನಾಥ್, ಖಜಾಂಚಿ ಸಿ.ಸಿ. ಶೇಷಾಚಾರಿ, ಪುರೋಹಿತ ಶರತ್ ಹಾಗೂ ಕಾರ್ಯಕಾರಿ ಮಂಡಳಿ ನಿರ್ದೇಶಕರು, ಸದಸ್ಯರು ಹಾಜರಿದ್ದರು.

ವಿವಿಧೆಡೆಯ ನೂರಾರು ಮಂದಿ ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.