ಕುಶಾಲನಗರ, ಮೇ ೨೪: ಯಾವುದೇ ಪಂದ್ಯಾಟದಲ್ಲಿ ಪಾಲ್ಗೊಳ್ಳುವುದು ಮುಖ್ಯವೇ ಹೊರತು ಸೋಲು-ಗೆಲುವು ಮುಖ್ಯ ಅಲ್ಲ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು. ಅವರು ಕುಶಾಲನಗರದಲ್ಲಿ ತಾಜ್ ಯೂತ್ ಫ್ರೆಂಡ್ಸ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕೊಡಗು ಮುಸ್ಲಿಂ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯ ಮೂಲಕ ಒಗ್ಗಟ್ಟು ಮೂಡಲು ಸಾಧ್ಯ ಎಂದು ಹೇಳಿದರು. ನಾಲ್ಕು ದಿನಗಳ ಕಾಲ ನಡೆಯಲಿರುವ ಪಂದ್ಯಾಟದಲ್ಲಿ ೬೨ ತಂಡಗಳು ಪಾಲ್ಗೊಂಡಿರುವುದಾಗಿ ಸಂಘಟಕರು ತಿಳಿಸಿದರು. ಈ ಸಂದರ್ಭ ಕುಶಾಲನಗರ ಪುರಸಭಾ ಸದಸ್ಯ ಪ್ರಮೋದ್ ಮುತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಪ್ರಮುಖರಾದ ಆದಂ, ಪಂದ್ಯಾವಳಿ ವ್ಯವಸ್ಥಾಪಕ ಅಜರ್ ಹಾಗೂ ಮತ್ತಿತರರು ಇದ್ದರು.