ಸೋಮವಾರಪೇಟೆ, ಮೇ ೨೫: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯವು ಸ್ಥಳೀಯವಾಗಿ ಜ್ಞಾನ ವೃದ್ಧಿಸುವ ಕೇಂದ್ರಗಳಾಗಿದ್ದು, ಪ್ರತಿಯೊಂದು ಮಾಹಿತಿಯೂ ಇಲ್ಲಿ ಸಿಗುವಂತಾಗಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಹೇಳಿದರು.

ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ತಾಲೂಕಿನ ಗ್ರಂಥಾಲಯ ಪ್ರಗತಿ ಪರಿಶೀಲನಾ ಸಭೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಶಿಕ್ಷಣ ಫೌಂಡೇಶನ್ ಸಹಯೋಗದ ಗ್ರಾಮ ಡಿಜಿ ವಿಕಸನದಡಿ ನೀಡಿರುವಂತಹ ಮಾನಿಟರ್, ಟಿ.ವಿ, ಮೊಬೈಲ್‌ಗಳಲ್ಲಿ ಪಠ್ಯ ಪುಸ್ತಕಕ್ಕೆ ಸಂಬAಧಿಸಿದ ವಿಷಯಗಳು, ಡಿಜಿಟಲ್‌ಗೆ ಸಂಬAಧಿಸಿದ ವಿಷಯಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಕಲಿಕೆಗೆ ಸ್ಥಳೀಯ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಉಪಯೋಗಿಸಿ ಕೊಳ್ಳಬೇಕು ಎಂದು ಹೇಳಿದರು.

ಕಳೆದ ಎರಡು ವರ್ಷದಲ್ಲಿ ಗ್ರಂಥಾಲಯ ನಿರ್ವಹಣೆ, ಅತ್ಯುತ್ತಮ ಅನುಷ್ಠಾನಕ್ಕೆ ಸಂಬAಧಪಟ್ಟ ಪ್ರಶಸ್ತಿಯನ್ನು ದುಂಡಳ್ಳಿ, ೭ನೇ ಹೊಸಕೋಟೆ, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಪಡೆಯಿತು. ಗ್ರಂಥಾಲಯ ಮೇಲ್ವಿಚಾರಕರಾದ ಎಸ್.ಪಿ. ದಿವ್ಯ, ಸರಿತಾ, ವಾಸಂತಿ ಪ್ರಶಸ್ತಿ ಸ್ವೀಕರಿಸಿದರು. ಇದೇ ಸಂದರ್ಭ ಲ್ಯಾಪ್‌ಟ್ಯಾಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ವಿಕಸನ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ರಕ್ಷಿತ್, ದಿಲೀಪ್ ಇದ್ದರು.