ಕುಶಾಲನಗರ, ಮೇ ೨೬: ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿವೃತ್ತ ನೌಕರರ ಸಂಘದ ವತಿಯಿಂದ ಮಾರುಕಟ್ಟೆ ರಸ್ತೆಯ ಸಂಘದ ಕಚೇರಿಯಲ್ಲಿ ಬುದ್ಧ ಜಯಂತಿ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಸಿದ್ದಪ್ಪ ಬುದ್ಧ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಬುದ್ಧರ ಚಿಂತನೆ ವಿಚಾರ ಹಾಗೂ ಮಾರ್ಗದರ್ಶನದಿಂದ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವೆಂದು ಹೇಳಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಬಿ.ಸಿ. ರಾಜು, ಕಾರ್ಯದರ್ಶಿ ಯು.ಟಿ. ರಾಮಯ್ಯ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.