ಕುಶಾಲನಗರ, ಮೇ ೨೬: ಶಿಕ್ಷಣದ ಮೂಲಕ ಮಾತ್ರ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕುಶಾಲನಗರದ ಸರಕಾರಿ ಇಂಜಿನಿಯರಿAಗ್ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಆರ್ಥಿಕ ಕೊರತೆ ಹೆಸರಿನಲ್ಲಿ ಶಿಕ್ಷಣವನ್ನು ಮೊಟಕುಗೊಳಿಸಬಾರದು. ಶಿಸ್ತು ಮತ್ತು ಗುರು ಹಿರಿಯರಿಗೆ ವಿಧೇಯತೆ ಮೂಲಕ ಸಾಧನೆ ಸಾಧ್ಯ ಎಂದರು

ಸರಕಾರಿ ಇಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಸತೀಶ್ ಎನ್.ಎಸ್. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಬೆಂಗಳೂರಿನ ಕ್ಯೂ ಸೈಡರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿರೀಶ್ ಶಿವಣ್ಣ, ಶನಿವಾರಸಂತೆ ವಿಘ್ನೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಯ ಕುಮಾರ್ ಮಾತನಾಡಿದರು. ಪ್ರಾಂಶುಪಾಲ ಡಾ. ಸತೀಶ್ ಎನ್.ಎಸ್. ಅವರು ಕಾಲೇಜಿನ ಸಮಗ್ರ ವರದಿ ಮಂಡಿಸಿದರು.

ಸಮಾರAಭದಲ್ಲಿ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ತಂಡದ ವಿದ್ಯಾರ್ಥಿಗಳಿಗೆ ಸಾಧಕರಿಗೆ ಬಹುಮಾನ ವಿತರಣೆ ನಡೆಯಿತು. ವೇದಿಕೆಯಲ್ಲಿ ವಿವಿಧ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅಂಕಿತ ಮತ್ತು ತಂಡ ಪಾರ್ಥಿಸಿ, ನಾಡಗೀತೆ ಹಾಡಿದರು. ವಿಭಾಗ ಮುಖ್ಯಸ್ಥ ಡಾ. ಪರಶಿವಮೂರ್ತಿ ಸ್ವಾಗತಿಸಿ, ಅಧೀಕ್ಷಕಿ ರೂಪ ಮತ್ತು ಉಪನ್ಯಾಸಕ ಮಹೇಂದ್ರ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.