ಗೋಣಿಕೊಪ್ಪ ವರದಿ, ಮೇ ೨೬: ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗೋಣಿಕೊಪ್ಪದ ಪತ್ರಿಕಾ ಏಜೆಂಟ್ ಪಿ.ಎ. ಇಸ್ಮಾಯಿಲ್ ಅವರನ್ನು ಸನ್ಮಾನಿಸಲಾಯಿತು.

೩೨ ವರ್ಷಗಳಿಂದ ಪತ್ರಿಕೆಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಲಾಯಿತು. ತಾ.೨೫ ರಂದು ಪೊನ್ನಂಪೇಟೆ ತಾಲೂಕು ಸಂಘ ಅಸ್ತಿತ್ವಕ್ಕೆ ಬಂದ ಹಿನ್ನೆಲೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಖಜಾಂಚಿ ವಿ. ವಿ. ಅರುಣ್‌ಕುಮಾರ್, ನಿರ್ದೇಶಕರಾದ ಚನ್ನನಾಯಕ, ಸಿಂಗಿ ಸತೀಶ್, ಸದಸ್ಯ ಮನೋಜ್‌ಕುಮಾರ್ ಇದ್ದರು.