ಸಿದ್ದಾಪುರ, ಮೇ ೨೭: ಕಳಪೆ ಕಾಮಗಾರಿಯಿಂದಾಗಿ ನೂತನವಾಗಿ ನಿರ್ಮಾಣ ಮಾಡಿದ ಚರಂಡಿಯು ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆದ ಚರಂಡಿ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿದ ಹಿನ್ನೆಲೆಯಲ್ಲಿ ಮಳೆಗೆ ಚರಂಡಿಯು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸಾರ್ವಜನಿಕರು ಪಂಚಾಯಿತಿ ಹಾಗೂ ಗುತ್ತಿಗೆದಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಚರಂಡಿಯ ಕಾಮಗಾರಿಯನ್ನು ಪುನರ್ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.