ಮಡಿಕೇರಿ, ಮೇ ೨೭: ನಗರದ ದೇಚೂರಿನ ಶ್ರೀರಾಮ ವಿದ್ಯಾಗಣಪತಿ ದೇವಾಲಯದಲ್ಲಿ ೨೭ನೇ ವರ್ಷದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಹೆಚ್.ಆರ್. ಉದಯ್ ಕುಮಾರ್ ತಂತ್ರಿ ನೇತೃತ್ವದಲ್ಲಿ ನಿರ್ಮಾಲ್ಯ, ಪುಣ್ಯಾಹ ವಾಚನ, ದೇವತಾ ಪ್ರಾರ್ಥನೆ, ಮಹಾಗಣಪತಿ ಮೂರ್ತಿಗೆ ಅಭಿಷೇಕ, ಬಯಲು ಆಂಜನೇಯ ಪೂಜೆ, ಅಷ್ಟದ್ರವ್ಯ ಮಹಾಗಣಪತಿ, ನವಗ್ರಹ ಹೋಮ, ನವಗ್ರಹ, ನಾಗಪೂಜೆ, ಮಹಾಪೂಜೆ, ಮಂಗಳಾರತಿ ನಡೆದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಇದೇ ಸಂದರ್ಭ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನೆ ಕಾರ್ಯಕ್ರಮ ನಡೆಯಿತು.