ಮುಳ್ಳೂರು, ಮೇ ೨೭: ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಡಗು ವಿಶ್ವ ವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಒಂದು ದಿನದ ಶಿಬಿರ ನಡೆಯಿತು.

ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಅಧೀನದ ಕಾಲೇಜುಗಳಲ್ಲಿ ಸ್ಥಾಪಿತಗೊಂಡ ರಾಷ್ಟಿçÃಯ ಸೇವಾ ಯೋಜನೆ ಘಟಕಗಳು ಒಳಪಟ್ಟಿದ್ದವು. ಆದರೆ ಈಗ ಕೊಡಗು ವಿಶ್ವ ವಿದ್ಯಾನಿಲಯ ಪ್ರತ್ಯೇಕವಾಗಿರುವ ಹಿನ್ನೆಲೆಯಲ್ಲಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ನೂತನ ಘಟಕವನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.

ನೂತನ ಘಟಕವನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಉದ್ಘಾಟಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ನಾಯಕತ್ವದ ಬೆಳವಣಿಗೆಗೆ ರಾಷ್ಟಿçÃಯ ಸೇವಾ ಯೋಜನೆ ಉತ್ತಮ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ಸ್ಥಾಪಿತವಾದ ರಾಷ್ಟಿçÃಯ ಸೇವಾ ಯೋಜನೆಯ ಘಟಕದ ಮೂಲಕ ಶಿಬಿರಗಳಲ್ಲಿ ಪಾಲ್ಗೊಂಡು ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕನಾಗುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್ ಮಾತನಾಡಿ, ಕೊಡಗು ಪ್ರತೇಕ ವಿಶ್ವವಿದ್ಯಾನಿಲಯವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಅಡಿಯಲ್ಲಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕವು ಸಹ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎಂದಿನAತೆ ತಮ್ಮ ಕಾಲೇಜಿನ ಎನ್‌ಎಸ್‌ಎಸ್ ಘಟಕದಲ್ಲಿ ತೊಡಗಿಸಿಕೊಂಡು ಈ ಮೂಲಕ ಶಿಬಿರಾರ್ಥಿಗಳು ಕೊಡಗು ವಿಶ್ವ ವಿದ್ಯಾನಿಲಯದ ಗಮನ ಸೆಳೆಯುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಜಗದೀಶ್ ಬಾಬು ಮಾತನಾಡಿದರು. ಕಾರ್ಯಕ್ರಮದ ಕುರಿತು ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು. ಈ ಸಂದರ್ಭದಲ್ಲಿ ಘಟಕದ ಶಿಬಿರಾರ್ಥಿಗಳು ಕಾಲೇಜು ಆವರಣದ ಜಾಗವನ್ನು ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದ ನಂತರ ಗಿಡಗಳನ್ನು ನೆಡುವ ಮೂಲಕ ಒಂದು ದಿನದ ಶಿಬಿರದಲ್ಲಿ ಕಾರ್ಯಚಟುವಟಿಕೆ ನಡೆಸಿದರು.