ಕೂಡಿಗೆ, ಮೇ ೨೭: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕೂಡಿಗೆ ಬಳಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಹೊನ್ನಾಪುರ ನಿವಾಸಿ ರಘುನಾಥ್ (೩೮) ಮೃತ ದುರ್ದೈವಿ. ಕೂಡಿಗೆ ಕಡೆಯಿಂದ ಹೆಬ್ಬಾಲೆ ಕಡೆಗೆ ಹೋಗುತ್ತಿದ್ದ ಸಂದರ್ಭ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಗಂಭೀರ ಗಾಯಗೊಂಡ ರಘುನಾಥ್ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದರೂ ತೀವ್ರ ರಕ್ತಸ್ರಾವ, ಗಂಭೀರ ಗಾಯದಿಂದ ಸವಾರ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

ಗುಡ್ಡೆಹೊಸೂರು ಸಮೀಪದ ನಿವಾಸಿ ಕಾರು ಚಾಲಕ ಸಂಜಯ್ ವಿರುದ್ಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.