ಮಡಿಕೇರಿ, ಮೇ ೨೭: ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂದಿನ ಮುಂಗಾರು ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಈಗಿನಿಂದಲೇ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ಮುಂಗಾರು ಸಂದರ್ಭದಲ್ಲಿ ಅಗತ್ಯ ಕಾರ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತಿತರ ಸಂಬAಧ ವೀಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಅವರು ಮಾತನಾಡಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ತಾಲೂಕು ಪಂಚಾಯಿತಿ ಇಒಗಳು ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಎಚ್ಚರವಹಿಸಬೇಕು ಎಂದರು. ಹೆಚ್ಚಿನ ಮಳೆಯಾಗಿ ಪ್ರವಾಹ ಉಂಟಾದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು. ಕುಡಿಯುವ ನೀರು ಸಂಬAಧಿಸಿದAತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಪ್ರತಿನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚಿನ ಕಾಳಜಿವಹಿಸಬೇಕು. ಯಾವುದೇ ರೀತಿಯ ಲೋಪ ಉಂಟಾಗದAತೆ ಗಮನಹರಿಸಬೇಕು.

ಪರಿಸರ ಮತ್ತು ಸ್ವಚ್ಛತೆ ಕಾಪಾಡುವತ್ತ ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲಾ-ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಹೊಟ್ಟೆನೋವು, ತಲೆನೋವು, ವಾಂತಿಬೇಧಿ ಇತರ ರೋಗಗಳು ಕಂಡುಬAದರೆ ಕೂಡಲೇ ಚಿಕಿತ್ಸೆ ನೀಡಬೇಕು. ಎಲ್ಲಾ ಹಂತದ ಅಧಿಕಾರಿಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಸಂಬAಧಪಟ್ಟ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳು ಪರಿಶೀಲಿಸಬೇಕು.

ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೆಲಸ ಮಾಡಿದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿದೆ. ಅದು ಬಿಟ್ಟು ಇತರರಿಗೆ ಬೊಟ್ಟು ಮಾಡುವುದು ಬೇಡ ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು. ಪೂರ್ವ ಮುಂಗಾರು ಸಂದರ್ಭದಲ್ಲಿ ಮನೆ ಹಾನಿಯಾಗಿದ್ದಲ್ಲಿ ಕೂಡಲೇ ಪರಿಶೀಲಿಸಿ ನಿಯಮಾನುಸಾರ ಪರಿಹಾರ ನೀಡಬೇಕು. ಮಳೆ ಹಾನಿ ಸಂಬAಧಿಸಿದAತೆ ಛಾಯಾಚಿತ್ರ ಸಹಿತ ಮಾಹಿತಿಯನ್ನು ಕಳುಹಿಸಬೇಕು. ಸೆಸ್ಕ್ ಇಲಾಖೆ ವ್ಯಾಪ್ತಿಯಲ್ಲಿ ಹೊರಗುತ್ತಿಗೆಯಡಿ ಗ್ಯಾಂಗ್‌ಮೆನ್‌ಗಳನ್ನು ನಿಯೋಜಿಸಿಕೊಂಡು ಮುಂಗಾರು ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಕೇರಳ ಗಡಿ ಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶೇ. ೬೦ ರಷ್ಟು ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬರೆಸಬೇಕು. ಆ ನಿಟ್ಟಿನಲ್ಲಿ ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು. ವೀಡಿಯೋ ಸಂವಾದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪಾಲ್ಗೊಂಡು ಹಲವು ಮಾಹಿತಿ ನೀಡಿದರು.