ಸುಂಟಿಕೊಪ್ಪ, ಮೇ ೨೯: ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ೨೦ನೇ ವಾರ್ಷಿಕೋತ್ಸವ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಮಹಾಬಲಭಟ್ ಹಾಗೂ ಹಿರಿಯ ಅರ್ಚಕ ಹಾ.ಮಾ. ಗಣೇಶ್ ಶರ್ಮಾ ನೇತೃತ್ವದಲ್ಲಿ ನಾಗಮಂಡಲದ ಅರ್ಚಕರಾದ ಸಂತೋಷ್ ಹೆಬ್ಬಾರ್, ರಾಘವೇಂದ್ರ ಭಟ್, ರವಿ ಭಟ್ ಅವರು ಬೆಳಿಗ್ಗೆ ದೇವರಿಗೆ ಶುದ್ಧಪೂಜೆ, ಪ್ರಾರ್ಥನೆ, ಪುಣ್ಯಾಹವಾಚನ ನೆರವೇರಿಸಿದರು.

ಆನಂತರ ಸುವಾಸಿನಿಯರ ಮೂಲಕ ಜಲಕುಂಭಗಳನ್ನು ಹರದೂರು ಹೊಳೆಯಿಂದ ತಂದು ದೇವರಿಗೆ ಅಭಿಷೇಕ ಮಾಡಲಾಯಿತು. ಬಳಿಕ ನವಗ್ರಹ ಹೋಮ, ಪೂರ್ವಕ ೯ ತೆಂಗಿನಕಾಯಿಗಳ ಗಣಹೋಮ, ಪೂರ್ಣಾಹುತಿಯ ನಂತರ ದೇವರಿಗೆ ಪಂಚಾಮೃತಾಭಿಷೇಕ ಪೂರ್ವಕತವಕ, ಕಲಶಾಭಿಷೇಕ ಪೂರ್ವಕ ಮಹಾಪೂಜೆಯ ನಂತರ ಅಲಂಕಾರ, ವಿವಿಧÀ ಹೂವುಗಳ ಪೂಜೆಗಳು ನಡೆದವು.

ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟವದಾನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ಭಕ್ತರಿಗೆ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.

ದೇವಾಲಯದ ಟ್ರಸ್ಟಿ ಎ. ಲೋಕೇಶ್ ಕುಮಾರ್, ಉತ್ಸವ ಸಮಿತಿಯ ಅಧ್ಯಕ್ಷ ಎಂ. ಮಂಜುನಾಥ್, ಕಾರ್ಯದರ್ಶಿ ಸುನಿಲ್ ಕುಮಾರ್, ಪದಾಧಿಕಾರಿಗಳಾದ ಸದಾಶಿವ ರೈ, ಚಂದುಸುರೇಶ್, ಅರುಣ್ ಪೂಜಾರಿ, ದಿವಾಕರ ರೈ, ರಮೇಶ್ ಪೂಜಾರಿ, ವಸಂತ, ಬಿ.ಎಂ. ಸುರೇಶ್, ಸುರೇಶ್ ಗೋಪಿ ಸೇರಿದಂತೆ ಇತರರು ಇದ್ದರು.