ಮಡಿಕೇರಿ, ಮೇ ೩೧: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೪-೨೫ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. ೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪೆನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.

ಪ್ರಸಕ್ತ (೨೦೨೪) ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ (ನೀರಾವರಿ) ಸಾಮಾನ್ಯ ವಿಮಾ (ಪ್ರತಿ ಎಕರೆಗೆ) ವಿಮಾ ಮೊತ್ತ ರೂ.೩೭,೭೩೮.೨೮ ರೈತರ ವಿಮಾಕಂತು ಶೇ. ೨ ರಂತೆ ೭೫೪.೭೭, ಭತ್ತ (ಮಳೆಯಾಶ್ರಿತ) ವಿಮಾ ಮೊತ್ತ ೨೫,೭೯೯.೬೩ ರೂ., ರೈತರ ವಿಮಾ ಕಂತು ಶೇ. ೨ ರಂತೆ ರೂ ೫೧೫.೯೯. ನೋಂದಾಯಿಸಿಕೊಳ್ಳಲು ೨೦೨೪ ರ ಆಗಸ್ಟ್ ೧೬ ಕೊನೆಯ ದಿನವಾಗಿದೆ.

ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ. ೨೨,೮೬೫.೫೫, ರೈತರ ವಿಮಾ ಕಂತು ಶೇ.೨ ರಂತೆ ರೂ. ೪೫೭.೩೧. ನೋಂದಾಯಿಸಿಕೊಳ್ಳಲು ಜುಲೈ ೩೧ ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾAಶದಲ್ಲಿ ಪಡೆಯಬಹುದು. (hಣಣಠಿ://ತಿತಿತಿ.sಚಿmಡಿಚಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ/) ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ಕೋರಿದ್ದಾರೆ.