ಸಿದ್ದಾಪುರ, ಮೇ ೩೧ : ಕಳಪೆ ಗುಣಮಟ್ಟದ ಚರಂಡಿ ಕಾಮಗಾರಿ ನಡೆಸಿದ ಆರೋಪ ಹಿನ್ನೆಲೆ ಸಿದ್ದಾಪುರದ ಮೈಸೂರು ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಚರಂಡಿಯ ಕಾಮಗಾರಿಯನ್ನು ಅಧಿಕಾರಿಗಳು ಪರಿಶೀಲಿಸಿದರು.

ಇತ್ತೀಚೆಗೆ ‘ಶಕಿ’್ತಯು ಈ ಬಗ್ಗೆ ವರದಿ ಪ್ರಕಟಿಸಿತ್ತು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ರೂ. ೨ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಚರಂಡಿ ಮಳೆ ಯಿಂದ ಕೊಚ್ಚಿ ಹೋಗಿತ್ತು. ಈ ಬಗ್ಗೆ ಪತ್ರಿಕೆಯಲ್ಲಿ ವರದಿ ಬಂದ ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಉದ್ಯೋಗ ಖಾತ್ರಿಯ ಇಂಜಿನಿಯರ್ ಸ್ಥಳ ಪರಿಶೀಲನೆ ಮಾಡಿದರು. ಇದು ಕಳಪೆ ಗುಣಮಟ್ಟದಿಂದ ಕೂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ನಿರ್ಮಾಣ ಮಾಡಲು ಆದೇಶ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.