ಸುಂಟಿಕೊಪ್ಪ, ಮೇ ೩೧: ಮಾದಾಪುರ ಸಮೀಪದ ಕುಂಬೂರುವಿನ ನೂತನವಾಗಿ ಲೋಕಾರ್ಪಣೆಗೊಂಡ ಪವಿತ್ರ ಕುಟುಂಬದ ದೇವಾಲಯದಲ್ಲಿ ಭಾನುವಾರದ ಪ್ರಥಮ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಲಾಯಿತು.

ಭಾನುವಾರದಂದು ಬೆಳಿಗ್ಗೆ ೧೦.೩೦ ಗಂಟೆಗೆ ಕುಂಬೂರುವಿನ ಪವಿತ್ರ ಕುಟುಂಬದ ದೇವಾಲಯದಲ್ಲಿ ಹಟ್ಟಿಹೊಳೆ ಜಪಸರಮಾತೆ ದೇವಾಲಯದ ಧರ್ಮಗುರು ರೆ.ಫಾ. ಗಿಲ್ಬರ್ಟ್ ಡಿಸಿಲ್ವ, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಾಯಕ ಧರ್ಮಗುರು ರೆ.ಫಾ. ನವೀನ್ ಕುಮಾರ್ ಹಾಗೂ ಪವಿತ್ರ ಕುಟುಂಬ ದೇವಾಲಯದ ಧರ್ಮಗುರು ರಾಜೇಶ್ ಅವರುಗಳು ಅಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಿದರು.

ಮಾದಾಪುರ, ಸುಂಟಿಕೊಪ್ಪ, ಹಟ್ಟಿಹೊಳೆ ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.