ಸಿದ್ದಾಪುರ, ಮೇ ೩೧ : ಬಟ್ಟೆ ಒಗೆಯಲು ಕೆರೆಗೆ ಇಳಿದ ಮಹಿಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಿದ್ದಾಪುರದ ಕೈರಾಸ್ ಕಾಫಿ ತೋಟದಲ್ಲಿ ನಡೆದಿದೆ. ತೋಟದಲ್ಲಿ ಕಾರ್ಮಿಕಳಾಗಿ ಕೆಲಸ ಮಾಡಿಕೊಂಡು ತೋಟದಲ್ಲಿ ವಾಸವಿದ್ದ ನೀತಾ (೩೨) ಮೃತ ದುರ್ದೈವಿ. ತೋಟದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿ ದ್ದಾರೆ ಈ ಬಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ನುರಿತ ಈಜುಗಾರರ ಸಹಾಯದಿಂದ ಮೃತದೇಹವನ್ನು ಕೆರೆಯಿಂದ ಹೊರ ತೆಗೆದರು. ಈ ಬಗ್ಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.