ಕುಶಾಲನಗರ, ಜೂ. ೧: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ ಎರಡು ಗ್ರಾಮಗಳನ್ನು ಪಾನಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸ ಲಾಗುವುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಫಾಯಸ್ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ನಡೆದ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ ಮದ್ಯ ಮತ್ತಿತರ ಚಟಗಳಿಂದ ವ್ಯಕ್ತಿಗಳನ್ನು ಪರಿವರ್ತನೆ ಮಾಡುವಲ್ಲಿ ವೇದಿಕೆ ಯಶಸ್ವಿಯಾಗಿದೆ.

ಇದೀಗ ಗ್ರಾಮಗಳನ್ನು ಪರಿವರ್ತನೆ ಮಾಡುವ ಮೂಲಕ ಪಾನಮುಕ್ತ ಗ್ರಾಮ ನಿರ್ಮಾಣ ಮಾಡುವುದು ವೇದಿಕೆಯ ಚಿಂತನೆಯಾಗಿದೆ ಎಂದರು. ಸರಕಾರ ನೂತನ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಬಾರದು, ಮನೆ ಮನೆಯಲ್ಲಿ ಮಾರಾಟ ಮಾಡುವ ಪ್ರಕರಣಗಳ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

ಈ ನಿಟ್ಟಿನಲ್ಲಿ ವೇದಿಕೆ ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ಸಂಬAಧಿಸಿದ ಅಧಿಕಾರಿ ಗಳಿಗೆ ಹಕ್ಕೊತ್ತಾಯ ಮಂಡನೆ ಮಾಡಲಿದೆ ಎಂದರು. ಮುಂದು ವರೆದು ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಮೂಲಕ ಸಾಲ ನೀಡುತ್ತಾರೆ. ಸಂಘ ಕೇವಲ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸುತ್ತದೆ. ಸದಸ್ಯರಿಗೆ ಪ್ರಗತಿ ನಿಧಿಯನ್ನು ನೀಡುತ್ತದೆ, ಪ್ರಗತಿ ಆಧಾರದ ಮೇಲೆ ನಿಧಿ ನೀಡುವ ಕಾರ್ಯ ನಡೆಯುತ್ತಿದೆ. .ಸಂಘದ ಹೆಸರಿನಲ್ಲಿ ಬಡ್ಡಿ ತೆಗೆದುಕೊಳ್ಳುವ ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವುದು ಸರಿಯಲ್ಲ. ಯೋಜನೆ ಸೇವಾ ಶುಲ್ಕ ಮಾತ್ರ ಪಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.

ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿಂದಿನ ಸಭೆಯ ನಡಾವಳಿಕೆಗಳು ಮತ್ತು ಕೈಗೊಂಡ ನಿರ್ಣಯಗಳ ಅನುಷ್ಠಾನದ ಕುರಿತು ಚರ್ಚಿಸ ಲಾಯಿತು. ವೇದಿಕೆ ಮೂಲಕ ಈ ಸಾಲಿನಲ್ಲಿ ನಡೆಯಬೇಕಾದ ಜಾಗೃತಿ ಕಾರ್ಯಕ್ರಮಗಳು, ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮಗಳು, ಮದÀ್ಯವರ್ಜನ ಶಿಬಿರ, ನವಜೀವನ ಸಮಿತಿಯ ಕಾರ್ಯಕ್ರಮಗಳು ಮತ್ತಿತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

೨೦೨೩-೨೪ನೇ ಸಾಲಿನ ವಾರ್ಷಿಕ ಸಾಧನೆಯ ಕುರಿತು ಯೋಜನಾಧಿಕಾರಿಗಳಿಂದ ವರದಿ ಮಂಡಿಸಲಾಯಿತು. ೨೦೨೪ ೨೫ ನೇ ಸಾಲಿನ ಕ್ರಿಯಾ ಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭ ವೇದಿಕೆಯ ಸದಸ್ಯರಿಗೆ ಆರೋಗ್ಯ ವಿಮೆಯ ಪತ್ರ ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯ ಉಪಾಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಬಾನಂಗಡ ಅರುಣ್, ವೇದಿಕೆ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ನಿರ್ದೇಶಕಿ ಲೀಲಾವತಿ, ಪ್ರಾದೇಶಿಕ ಅಧಿಕಾರಿ ಗಣೇಶ್ ಆಚಾರ್ಯ ವಿಪತ್ತು ನಿರ್ವಹಣಾ ತಂಡದ ಪ್ರಮುಖರು, ವೇದಿಕೆ ಸದಸ್ಯರು, ಸೋಮವಾರ ಪೇಟೆ ಮಡಿಕೇರಿ ವೀರಾಜಪೇಟೆ, ಪಿರಿಯಾಪಟ್ಟಣ, ಬೆಟ್ಟದಪುರ, ಅರಕಲಗೂಡು ತಾಲೂಕುಗಳ ಯೋಜನಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.