ಚೆಯ್ಯಂಡಾಣೆ, ಜೂ ೧: ಸಮೀಪದ ಕಿಕ್ಕರೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳನ್ನು ಹೂಗುಚ್ಚದೊಂದಿಗೆ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಉಮ್ಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿಕ್ಕರೆಯ ಯೂಸೂಫ್ ಹಾಗೂ ಸಮ್ಮದ್ ಅವರ ಸಂಬAಧಿಕರಾದ ಮೂಲತಃ ಕೊಡಗಿನವರೇ ಆದ ಬೆಂಗಳೂರಿನಲ್ಲಿ ನೆಲೆಸಿರುವ ಫಾತಿಮಾರವರು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕ್ರೀಡಾ ಪರಿಕರಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಇದೇ ಸಂದರ್ಭ ದಾನಿ ಫಾತೀಮಾ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಮಮ್ಮದ್, ಕಿಕ್ಕರೆ ಮುಸ್ಲಿಂ ಜಮಾಅತ್ ಅಧ್ಯಕ್ಷ ಬಷೀರ್, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸುಮಿತ್ರ ಸ್ವಾಗತಿಸಿ, ಸುಜಾತ ವಂದಿಸಿದರು.