ಸುಂಟಿಕೊಪ್ಪ, ಜೂ. ೧: ಇಲ್ಲಿನ ಗುಡ್ಡಪ್ಪ ರೈ ಬಡಾವಣೆಯ ಒಂದನೇ ವಿಭಾಗದ ವಿಜಯ್ ಎಂಬವರ ಮನೆ ಹಿಂಭಾಗದಲ್ಲಿ ಸುಂಟಿಕೊಪ್ಪ ಪಟ್ಟಣದ ತ್ಯಾಜ್ಯ ನೀರು ಹರಿಯುತ್ತಿದ್ದು ಕೆÀಲವೆಡೆ ನಿಂತಲ್ಲೇ ನೀರು ನಿಲ್ಲುವುದರಿಂದ ರೋಗ ಹರಡುವ ಭೀತಿ ಸೃಷ್ಟಿಯಾಗಿದೆ ಎಂದು ಈ ಭಾಗದ ನಿವಾಸಿಗಳು ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಂಟಿಕೊಪ್ಪ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿ ಈ ಭಾಗದಲ್ಲಿ ತಡೆಗೋಡೆ ಚರಂಡಿ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಗಬ್ಬು ವಾಸನೆಯಿಂದ ಇಲ್ಲಿನ ನಿವಾಸಿಗಳಿಗೆ ರೋಗ ಹರಡುವ ಮೊದಲು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈ ಭಾಗದ ನಿವಾಸಿಗಳಿಗೆ ಆಗುವ ತೊಂದರೆಯನ್ನು ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.