ಸುಂಟಿಕೊಪ್ಪ, ಜೂ. ೨: ರಾಷ್ಟಿçÃಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ಹಿಂಬದಿಯಿAದ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಸುಂಟಿಕೊಪ್ಪ ಅಯ್ಯಪ್ಪ ದೇವಸ್ಥಾನದ ಬಳಿಯಲ್ಲಿ ಸುಂಟಿಕೊಪ್ಪದಿAದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಸ್ಕೂಟಿ (ಪಿವೈ೦೧ ಸಿಎಂ೪೯೬೮)ಗೆ ಕೇರಳದ ಕಣ್ಣೂರಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಇನ್ನೋವಾ (ಕೆಎಲ್ ೪೬ ಸಿ ೯೧೦೦) ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಇಬ್ರಾಹಿಂ (೬೦) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸುಂಟಿಕೊಪ್ಪದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ತೀವ್ರ ಸ್ವರೂಪದ ಗಾಯವಾಗಿರುವ ಹಿನೆÀ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ. ಶ್ರೀಧರ್ ಹಾಗೂ ಸಿಬ್ಬಂದಿ ತೆರಳಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.