ಮಡಿಕೇರಿ, ಜೂ. ೨: ವಯೋನಿವೃತ್ತಿ ಹೊಂದಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮಾಕಾಂತ್, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕರಾದ ಎಂ.ಇ ಮೋಹನ್ ಅವರಿಗೆ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಜರಿದ್ದರು. ಉಮಾಕಾಂತ್ ಮತ್ತು ಮೋಹನ್ ಅವರು ಬ್ಯಾಂಕ್‌ನ ಶ್ರೆಯೋಭಿವೃದ್ಧಿಗಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.