ವೀರಾಜಪೇಟೆ, ಜೂ. ೨: ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ಎಲ್ಲಾ ರೀತಿಯಲ್ಲೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆರೋಗ್ಯ ಸುಧಾರಿಸಿಕೊಳ್ಳಲು ಉತ್ತಮ ಆಸ್ಪತ್ರೆಗಳ ಸೇವೆ ಅಗತ್ಯ ಎಂದು ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಹೇಳಿದರು.

ಪಟ್ಟಣದ ರಸ್ತೆ ಸಾರಿಗೆ ಬಸ್ಸ್ ನಿಲ್ದಾಣದ ಬಳಿ ನೂತನವಾಗಿ ಆರಂಭಗೊAಡ ಅಮಲಾ ಸ್ಪೇಷಾಲಿಟಿ ಕ್ಲಿನಿಕ್‌ನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಜನರ ಆರೋಗ್ಯದ ದೃಷ್ಟಿಯಿಂದ ಸಂಸ್ಥೆ ಉತ್ತಮವಾದ ಸೇವೆ ನೀಡುವಂತಾಗಲಿ ಎಂದು ಹೇಳಿದರು. ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಫಾದರ್ ಮದಲೈಮುತ್ತು ಮಾತನಾಡಿ ಕೊಡಗು ಜಿಲ್ಲೆ ಆಸ್ಪತ್ರೆ ವ್ಯವಸ್ಥೆಯನ್ನು ಹೊರತುಪಡಿಸಿ ರಕ್ಷಣಾಕ್ಷೇತ್ರ, ಕ್ರೀಡೆ ಸೇರಿದಂತೆ ಎಲ್ಲಾ ಕೇತ್ರಗಳಲ್ಲಿ ಮುಂದಿದೆ. ಆರೋಗ್ಯ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಲಿ ಎಂದು ಹೇಳೀದರು.ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಮ್ಯಾಥ್ಯೂ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭೆ ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ಎಸ್.ಎಚ್. ಮತೀನ್, ಕಾಂಗ್ರೆಸ್ ಮುಖಂಡ ಅಜ್ಜಿಕುಟ್ಟಿರ ಕಾರ್ಯಪ್ಪ ಉಪಸ್ಥಿತರಿದ್ದರು.