ಕಡಂಗ, ಜೂ. ೩: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆಯ ೨೦೨೩-೨೪ರ ಶೈಕ್ಷಣಿಕ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ತಾ.೫ ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ದಯಾನಂದ ಕೆ.ಸಿ. ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಸಾಹಿತಿ, ಕೊಡಗು ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ತಜ್ಞ ಮೇಜರ್ ಡಾ. ಕುಶ್ವಂತ್ ಕೋಳಿಬೈಲು, ಹಾಕಿ ಇಂಡಿಯನ್ ಕ್ಯಾಂಪರ್ ಕರಿನೆರವಂಡ ಬಿದ್ದಪ್ಪ ಭಾಗವಹಿಸಲಿರುವರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಬಸವರಾಜು ಕೆ, ಕ್ರೀಡಾ ಸಂಚಾಲಕಿ ರಾಖಿ ಪೂವಣ್ಣ, ಐಕ್ಯೂಎಸಿ ಸಂಚಾಲಕ ನಾಗರಾಜಮೂರ್ತಿ ಮತ್ತು ಕಾಲೇಜಿನ ವಿದ್ಯಾರ್ಥಿ ಸಮಿತಿಯ ಉಪಾಧ್ಯಕ್ಷ ಅಜಿತ್ ಹೆಚ್.ಎ, ಜಂಟಿ ಕಾರ್ಯದರ್ಶಿ ವಿನಯ್ ಹಾಗೂ ವಿದ್ಯಾರ್ಥಿ ವೇದಿಕೆಯ ಪದಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.