ಸುಂಟಿಕೊಪ್ಪ, ಜೂ. ೩: ಗರಗಂದೂರು ಬಿ ತೋಟದ ಸಮೀಪದ (ಹೊಸತೋಟ) ಬಸ್ ಪ್ರಯಾಣಿಕರ ತಂಗುದಾಣದಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ.

ಸೋಮವಾರ ಸಂಜೆ ವೇಳೆಯಲ್ಲಿ ಹೊಸತೋಟ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ಬಂದ ಮೇರೆಗೆ ಠಾಣಾಧಿಕಾರಿ ಎಂ.ಸಿ. ಶ್ರೀಧರ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮೃತ ವ್ಯಕ್ತಿಯನ್ನು ಮೈಸೂರು ಜಿಲ್ಲೆಯ ಇಲವಾಲದ ಹೊಸಕೋಟೆ ಗ್ರಾಮದ ಚಂದ್ರು ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.