ಮಡಿಕೇರಿ, ಜೂ. ೩: ಕಳೆದ ಶುಕ್ರವಾರ ಕಂಕನಾಡಿಯಲ್ಲಿ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಪ್ರಕರಣವನ್ನು ಪ್ರಶ್ನಿಸಿದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ಯ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರ ಮೇಲೆ ಮೊಕದ್ದಮೆ ದಾಖಲು ಮಾಡಿ, ನಮಾಜ್ ಮಾಡಿದವರಿಗೆ ಬಿ ರಿಪೋರ್ಟ್ ಹಾಕುವುದಕ್ಕೆ ಒತ್ತಡ ಹಾಕಿ ಕಾನೂನನ್ನು ದುರುಪಯೋಗಪಡಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕರ್ನಾಟಕ ರಾಜ್ಯಪಾಲರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ತು ಮತ್ತು ಭಜರಂಗದಳದ ಪದಾಧಿಕಾರಿಗಳು ಪೊನ್ನಂಪೇಟೆ ದಂಡಾಧಿಕಾರಿಗಳ ಮೂಲಕ ದೂರು ಸಲ್ಲಿಸಿದರು.