ಮಡಿಕೇರಿ, ಜೂ. ೭: ರಾಷ್ಟç ನಿರ್ಮಾಣದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರ ಕೊಡುಗೆ ಮಹತ್ತರವಾದದ್ದು ಎಂದು ಕೊಡಗು ವಿಶ್ವ ವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜಕಿ ಡಾ. ಗುಣಶ್ರೀ ಅಭಿಪ್ರಾಯಪಟ್ಟರು.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಫಟಕಗಳ ವಾರ್ಷಿಕ ಶಿಬಿರವನ್ನು ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದ ಅವರ,Ä ಜಾಗೃತಿ ಪ್ರಜ್ಞೆಯಿಂದ ಸಮಾಜಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ರೂಪಿಸಬೇಕು. ವಿದ್ಯಾರ್ಥಿ ಬದುಕಿಗೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಂಕಜಾಕ್ಷನ್ ಓ.ಎಂ. ಮಾತನಾಡಿ, ಮಾನವೀಯ ಮೌಲ್ಯಗಳನ್ನು ಮರುಸ್ಥಾಪಿಸುವ ಕಡೆಗೆ ನಮ್ಮ ಸಹಭಾಗಿತ್ವ ಇರಬೇಕು ಎಂದರು. ಮತ್ತೊರ್ವ ಅತಿಥಿ ಗಾಳಿಬೀಡು ಗ್ರಾಮ ಪಂಚಾಯಿತಿಯ ಪಿಡಿಓ ಶಶಿಕಿರಣ್ ಮಾತನಾಡಿ, ಗ್ರಾಮೀಣ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, ಸ್ವಯಂ ಸೇವಕರಿಗೆ ಶಿಸ್ತು-ಸಂಯಮ ತುಂಬಾ ಅಗತ್ಯ. ಸ್ವಚ್ಛ ಗುಣಗಳನ್ನು ರೂಪಿಸಿಕೊಂಡು ಸಮಾಜದಲ್ಲಿರುವ ಕಲ್ಮಶವನ್ನು ತೊಡೆದುಹಾಕಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸುಧಾಮಣಿ ಎಂ.ಆರ್. ಹಾಜರಿದ್ದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಂಯೋಜನಾಧಿಕಾರಿ ಡಾ. ಎ.ಎನ್. ಗಾಯತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಮುಸ್ತಫಾ ಕೆ.ಹೆಚ್ ನಿರೂಪಿಸಿದರು. ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಲೋಕ್ ಬಿಜೈ ಸ್ವಾಗತಿಸಿ, ವಂದಿಸಿದರು.