ಮಡಿಕೇರಿ, ಜೂ. ೮: ನರೇಂದ್ರ ಮೋದಿ ಅವರು ತಾ. ೯ ರಂದು (ಇಂದು) ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳು ತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ.

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮೊದಲು ಜಿಲ್ಲೆಯ ನಗರ, ಗ್ರಾಮಾಂತರ ಮಂಡಲ ಸೇರಿದಂತೆ ಎಲ್ಲಾ ಮಂಡಲ ಮತ್ತು ಎಲ್ಲಾ ಶಕ್ತಿ ಕೇಂದ್ರಗಳಲ್ಲಿ, ಶಕ್ತಿ ಕೇಂದ್ರದ ಹಾಗೂ ಮಂಡಲದÀ ಪ್ರಮುಖರು, ಸಹ ಪ್ರಮುಖರು, ಚುನಾಯಿತ ಜನಪ್ರತಿನಿಧಿ ಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು, ಸಮಿತಿ ಸದಸ್ಯರು, ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ಹಿತೈಷಿಗಳು ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿ ಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.