ಮಡಿಕೇರಿ, ಜೂ. ೯: ೩ನೇ ಬಾರಿಗೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ನಗರದ ೭ ಹಾಗೂ ೮ನೇ ವಾರ್ಡ್ ಬಿಜೆಪಿ ಕಾರ್ಯಕರ್ತ ರಿಂದ ಇಲ್ಲಿನ ಚೌಡೇಶ್ವರಿ ದೇವಾಲಯ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭಾ ಸದಸ್ಯೆ ಸವಿತಾ ರಾಕೇಶ್, ಹಿಂದುಳಿದ ಮೋರ್ಚಾದ ಸಹ ಕಾರ್ಯದರ್ಶಿ ಬಿ.ಎಂ. ರಾಜೇಶ್, ವಾರ್ಡ್ ಅಧ್ಯಕ್ಷ ಬಿ.ಎಂ. ರಾಕೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಡಿ.ಪಿ. ನಾಗೇಶ್, ಪ್ರಮುಖರಾದ ಕನ್ನಂಡ ಸಂಪತ್, ಸಂತೋಷ್, ಬೊಳ್ಳಜಿರ ಅಯ್ಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.