ಚೆಟ್ಟಳ್ಳಿ, ಜೂ. ೧೦: ಮರ ಕಪಾತು ಮಾಡುತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸುಬ್ರಮಣಿ (೪೮) ಮೃತಪಟ್ಟ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಚೆಟ್ಟಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಸುಬ್ರಮಣಿ ತಾ.೬ರಂದು ತನ್ನ ಸಹೋದರ ಅಣ್ಣಪ್ಪ ಹಾಗೂ ಮತ್ತೋರ್ವ ಮಣಿ ಎಂಬವರೊAದಿಗೆ ಚೆಟ್ಟಳ್ಳಿಯ ಚಂಗಪ್ಪ ಎಂಬವರ ತೋಟದಲ್ಲಿ ಮರ ಕಪಾತು ಮಾಡುತ್ತಿದ್ದರು. ಕೆಲಸದ ಸಂದರ್ಭ ಕೈಗೆ ಗಾಯವಾದ್ದರಿಂದ ತೋಟದ ಮಾಲೀಕ ಚಂಗಪ್ಪನವರು ಸಮೀಪದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ.

ನಂತರ ತೋಟಕ್ಕೆ ಆಗಮಿಸಿದ ಕಾರ್ಮಿಕ ಸುಬ್ರಮಣಿ ಮರವನ್ನೇರಿದ್ದಾರೆ. ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಮರಣ ಹೊಂದಿದ್ದಾರೆ. ಮಂಗಳೂರಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಮೃತರು ಪತ್ನಿ, ಓರ್ವ ಗಂಡು, ಈರ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರುದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.