ಕರಿಕೆ,ಜೂ. ೧೦: ಭಾಗಮಂಡಲ- ಕರಿಕೆಗಾಗಿ ಕೇರಳ ಸಂಪರ್ಕ ಕಲ್ಪಿಸುವ ಅಂತರ್ ರಾಜ್ಯ ಹೆದ್ದಾರಿಯ ಕೊಟ್ಟೆಮಲೆ ಬಳಿ ಮರವೊಂದು ಉರುಳಿ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ಆಗಿದೆ. ತಲಕಾವೇರಿ ವನ್ಯಜೀವಿ ವಲಯದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಯಂತ್ರದ ಸಹಾಯದಿಂದ ಮರವನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.