ಸಿದ್ದಾಪುರ, ಜೂ. ೧೦: ಸಿದ್ದಾಪುರದ ಮಡಿಕೇರಿ ರಸ್ತೆಯಲ್ಲಿರುವ ಕಾವೇರಿ ನದಿ ಸಮೀಪದ ಶ್ರೀ ಮುನೇಶ್ವರ ದೇವಾಲಯದ ವಾರ್ಷಿಕ ಉತ್ಸವ ವಿವಿಧ ಪೂಜಾ ಕಾರ್ಯಕ್ರಮ ಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಇತ್ತೀಚಿಗೆ ಮುನೇಶ್ವರ, ಗುಳಿಗ ಹಾಗೂ ನಾಗದೇವರ ಮತ್ತು ಚಾಮುಂಡಿಯ ಮೂರ್ತಿಗಳ ಪ್ರತಿಷ್ಠಾಪನೆಗಳನ್ನು ಮಾಡಲಾಗಿದೆ. ದೇವಾಲಯದ ವಾರ್ಷಿಕೋತ್ಸವ ಅಂಗವಾಗಿ ಪೂಜೆ ಕಾರ್ಯಗಳು ಮುಗಿದ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಸಿದ್ದಾಪುರ ಸುತ್ತಮುತ್ತಲಿನ ಸಾರ್ವಜನಿಕರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.