ಮಡಿಕೇರಿ, ಜೂ. ೧೨: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ-ಮೀನು ಕೃಷಿಕರಿಂದ ಅರ್ಜಿ ಆಹ್ವಾನಿ ಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೨೯ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬAಧಪಟ್ಟ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚಿನ್ ತಿಳಿಸಿದ್ದಾರೆ.