ಕೂಡಿಗೆ, ಜೂ. ೧೨: ಕಳೆದ ಹತ್ತು ದಿನಗಳಿಂದ ಸತತವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣವು ಹೆಚ್ಚಾದಂತೆ ನೀರಿನ ಹರಿಯುವಿಕೆ ಮಟ್ಟವು ಹೆಚ್ಚಾಗಿರುವುದು ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಕಂಡು ಬರುತ್ತಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿಯೂ ಅತಿಯಾದ ಮಳೆ ಬೀಳುತ್ತಿದ್ದು, ಹಾರಂಗಿ ಅಣೆಕಟ್ಟೆಗೆ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಳವಾಗಿದೆ.