ಗೋಣಿಕೊಪ್ಪಲು, ಜೂ. ೧೨: ವೀರಾಜಪೇಟೆ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆ ವಾಹನವೊಂದು ಡಿಕ್ಕಿ ಹೊಡೆದ ಹಿನೆÀ್ನಲೆ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ೯ ಗಂಟೆಗೆ ನಡೆದಿದೆ. ಮೃತಪಟ್ಟ ವ್ಯಕ್ತಿಗೆ ಅಂದಾಜು ೪೫ ವರ್ಷ ಪ್ರಾಯವಿದ್ದು ಗುರುತು ಪತ್ತೆಯಾಗಿಲ್ಲ. ಗೋಣಿಕೊಪ್ಪ ಶವಗಾರದಲ್ಲಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಇಡಲಾಗಿದೆ. ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.