ಮಡಿಕೇರಿ, ಜೂ.೧ ೩ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಾಜಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭ ರಿಜಿಸ್ಟಾçರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು. ಸದಾನಂದಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು

(ಮೊದಲ ಪುಟದಿಂದ) ಗ್ರಾಮದ ಮಾವಾಜಿ ಕುಟುಂಬದವರಾಗಿದ್ದಾರೆ.

ಅಧಿಕಾರ ವಹಿಸಿಕೊಂಡ ಬಳಿಕ ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಓ ವರ್ಣಿತ್ ನೇಗಿ, ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡರು ಸುವರ್ಣ ಕರ್ನಾಟಕ ಸಮುಚ್ಚಯ ಭವನ ಶೀಘ್ರದಲ್ಲಿ ಪೂರ್ಣಗೊಳಿಸಿಕೊಡಬೇಕಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಅವರಲ್ಲಿ ನೂತನ ಅಧ್ಯಕ್ಷರು ಮನವಿ ಮಾಡಿದರು. ಈ ಸಂದರ್ಭ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಚಂದ್ರಶೇಖರ್ ಪೆರಾಲು ಇದ್ದರು.